ಪೋಸ್ಟ್‌ಗಳು

ರೊಟ್ಟಿ ಮತ್ತು ತೊವ್ವೆ

ಇಮೇಜ್
 ರೊಟ್ಟಿ ಮತ್ತು ತೊವ್ವೆ ಮೂಲ: ಡೇವಿಡ್ ವೈಟ್ ಕನ್ನಡಕ್ಕೆ: ಸಿ ಪಿ ರವಿಕುಮಾರ್  ಯಾರೆಂದರು ಇದು ಮಾಹಿತಿ ಯುಗವೆಂದು ಇದು ಮಾಹಿತಿ ಯುಗವಲ್ಲ. ಬಿಡಿ ಸುದ್ದಿವಾಹಿನಿ ಪತ್ರಿಕೆ  ಮತ್ತು ಸ್ಕ್ರೀನ್ ತುಂಬ  ಕೆಂಪು Mಬಣ್ಣದ ಬ್ರೇಕಿಂಗ್ ನ್ಯೂಸ್. ಇದು ರೊಟ್ಟಿ ಮತ್ತು ತೊವ್ವೆಯ ಯುಗ. ಜನ ಹಸಿದಿದ್ದಾರೆ  ಮತ್ತು ಒಂದು ಒಳ್ಳೆಯ ಮಾತು ತಣಿಸಬಲ್ಲದು ಸಾವಿರ ಮಂದಿಯ ಹಸಿವು.

ಸೂರ್ಯಾಸ್ತ

ಇಮೇಜ್
   ಮೂಲ: ಎಲ್ಲಿಸ್ ನೈಟಿಂಗೇಲ್  ಕನ್ನಡಕ್ಕೆ : ಸಿ ಪಿ ರವಿಕುಮಾರ್ ಕುಳಿತಿರುವೆ ಒಂದು ಹಳೆಯ ಕಲ್ಲುಗೋಡೆಯ ಮೇಲೆ ನೀವು ಅಂದುಕೊಂಡಷ್ಟೇನೂ ಕೊರೆಯುತ್ತಿಲ್ಲ ತಣ್ಣಗೆ ಇಲ್ಲಿಂದ ಕಾಣುತ್ತಿದೆ ಗುಲಾಬಿ ಬಣ್ಣದ ಗಗನ ಮತ್ತು ಅಲ್ಲಿ ಸೂರ್ಯನು ಮುಳುಗುತ್ತಿರುವುದು ಮೆಲ್ಲಗೆ. ಶಾಂತ ಸಾಗರದಂತೆ ಗಾಳಿ ತೊನೆಯುತ್ತಿದೆ ಮೆಲ್ಲಗೆ ತುಂಬಿಕೊಂಡು ತನ್ನಲ್ಲಿ ಮೃದುವಾದ ಕಲಕಲ ನನಗಂತೂ ಹೊಳೆಯುತ್ತಿಲ್ಲ ಇದಕ್ಕಿಂತ ಉತ್ತಮ ಮಾರ್ಗ ವ್ಯರ್ಥಗೊಳಿಸಲು ನನಗೆ ಸಿಕ್ಕ ಕಾಲ.

ಬೆಂಕಿ ಮತ್ತು ಪತಂಗ

ಇಮೇಜ್
  ಅದು ಯಾರ ತಪ್ಪೂ ಆಗಿರಲಿಲ್ಲ ಅದು ಎಲ್ಲರ ತಪ್ಪೂ ಆಗಿತ್ತು. ಕ್ಯಾಮೆರಾ ಇದೆಯೆಂದು ಸೆಲ್ಫೀ ತೆಗೆಯುವ ಖಯಾಲಿ ಜಲಪಾತದ ಎದುರು ಮೊಬೈಲ್ ಫೋನ್ ಹಿಡಿದು ನಿಂತವಳು ತನ್ನನ್ನೇ ನೋಡುತ್ತಾ ನೋಡುತ್ತಾ ಹಿಂಜರಿದು ಜಲಸಮಾಧಿಯಾದಳು. ಅಪ್ಪನ ಕಾರ್ ಕೀ ಸಿಕ್ಕ ಸಂಭ್ರಮದಲ್ಲಿ ಹುಡುಗ ಹೊರಟ  ಸ್ನೇಹಿತರ ಜೊತೆಗೆ ಗಾಳಿಯೊಂದಿಗೆ ಮಾತಾಡುತ್ತಾ ಗಾಳಿಯೇ ನಾನು ಚಲಿಸಬಲ್ಲೆ ನಿನಗಿಂತ ವೇಗವಾಗಿ ಎನ್ನುತ್ತಾ ಸಾಗಿ ಯಾವುದೋ ಕ್ಷಣದಲ್ಲಿ ಹಾರಿದ ವಾಯುವಿನಲ್ಲೇ ವಿಲೀನವಾಗಿ. ಹೀರೋ ಎಂದರೆ ಹೀಗಿರಬೇಕು. ಗಾಡಿಯನ್ನು ಹತ್ತಿಸಬೇಕು ಮೆಟ್ಟಿಲುಗಳ ಮೇಲೆ ಮೇಲಿಂದ ಹಾರಿ ಸ್ಲೋ ಮೋಷನ್ನಲ್ಲಿ ವಿಲನ್ ಎದೆಗೆ ಒದೆಯಬೇಕು. ಅಪ್ಪಾ ಹೇಳಬೇಡ ಹಳ್ಳಿಯನ್ನು ಉದ್ಧಾರ ಮಾಡಿದ ಬಂಗಾರದ ಮನುಷ್ಯನ ಕತೆ. ಅವೆಲ್ಲ ಬರೀ ಸುಳ್ಳು. ಯಾರಿಂದಲೂ ಸಾಧ್ಯವಿಲ್ಲ ಹಳ್ಳಿಯನ್ನು  ಉದ್ಧಾರ ಮಾಡುವುದು. ಅಮ್ಮಾ ಹೇಳಬೇಡ ಉಪವಾಸ ಮಾಡಿ ಸರಕಾರವನ್ನು ಬಗ್ಗಿಸಿದ ಮಹಾತ್ಮನ ಕತೆ. ಅದೆಲ್ಲಾ ಯಾರೋ ಕಟ್ಟಿದ ಫೇಕ್ ನ್ಯೂಸ್. ನೂರಾರು ವರ್ಷ ಬೇಕಾಯಿತಾ  ಸ್ವಾತಂತ್ರ್ಯ ಸಂಗ್ರಾಮಕ್ಕೆ! ಮೈ ಗಾಡ್ ಎಷ್ಟು ಬೋರಿಂಗ್. ಏನು ಪ್ರಯೋಜನ ಹಾಗೆ ಬದುಕಿ! ಫಾಸ್ಟ್ ಫಾರ್ವರ್ಡ್ ಮಾಡಬೇಕು. ಫಾಸ್ಟ್ ಮಾಡುತ್ತಾ ಕೂಡುವುದು ಬ್ಯಾಕ್ವರ್ಡ್ ಥಿಂಕಿಂಗ್. ನುಗ್ಗಬೇಕು. ಕಸಿದುಕೊಳ್ಳಬೇಕು. ಬೆಂಕಿಯ ಹತ್ತಿರ ಹೋಗುತ್ತಿತ್ತು ಪತಂಗ. ಬೆಂಕಿಯ ತಪ್ಪೂ ಆಗಿರಲಿಲ್ಲ. ಸುಡುವ ಗುಣವನ್ನು ಕೊಟ್ಟದ್ದು ಪ್ರಕೃತಿ. ಪತಂಗದ ತಪ್ಪ...

ಧೂಳು

ಇಮೇಜ್
 ಮೂಲ: ಡೋರಿಯನ್ ಲಾ ಕನ್ನಡಕ್ಕೆ: ಸಿ ಪಿ ರವಿಕುಮಾರ್ ಯಾರೋ ನೆನ್ನೆ ರಾತ್ರಿ ಆಡಿದ ಮಾತು ತಟ್ಟಿತು.  ಆಡಿದ್ದು ಒಂದೆರಡೇ ಆದರೂ ನಿಜ ಹೇಳುತ್ತಿದ್ದರು ಎಂದು ನಾನು ಗುರುತಿಸಿದೆ. ಕೂಡಲೇ ಮೇಲೆದ್ದು ಬರೆದಿಟ್ಟುಕೊಳ್ಳಬೇಕು ಎನ್ನಿಸಿತು ಆದರೆ ತುಂಬಾ ತಡವಾಗಿತ್ತು, ದಣಿವಾಗಿತ್ತು ದುಡಿದು ಇಡೀ ದಿವಸ ತೋಟದಲ್ಲಿ ಕಲ್ಲುಗಳನ್ನು ಜರುಗಿಸುತ್ತಾ. ಈಗ ನನಗೆ ನೆನಪಿರುವುದು ಅದರ ಘಮ ಮಾತ್ರ ಇಲ್ಲ, ಊಟದ ವ್ಯಂಜನದಂತಲ್ಲ,  ಘಾಟು ಅಥವಾ ಸಿಹಿಯಲ್ಲ, ಸಣ್ಣ ಪುಡಿಯಂತೆ, ಧೂಳಿನ ಹಾಗೆ. ಕೇಳಿ ನಾನೇನೂ ಉಬ್ಬಲಿಲ್ಲ ಅಥವಾ ಹೆದರಿ ಕೊಳ್ಳಲಿಲ್ಲ. ನಾನು ಸಂಪೂರ್ಣ ಎಚ್ಚೆತ್ತುಕೊಂಡು  ಗಮನವಿಟ್ಟು ಕೇಳುತ್ತಿದ್ದೆ. ಕೆಲವು ಸಲ ಹಾಗೇ. ದೇವರು ಕಪ್ಪು ರೆಕ್ಕೆಯನ್ನು ತೊಟ್ಟು, ಬೆಳಕಿನಂತೆ ಜಗಜಗಿಸುತ್ತಾ ನಿಮ್ಮ ಕಿಟಕಿಯ ಎದುರು ಬಂದು ನಿಲ್ಲುತ್ತಾನೆ. ಆದರೆ ತೆರೆಯಲು ನಿಮಗೆ ವಿಪರೀತ ದಣಿವು.

ಟೆಲಿಫೋನ್

ಇಮೇಜ್
ಮೂಲ: ಮೆಲ್ ಮೆಕ್ ಮಾಒನ್ ಕನ್ನಡ ಅನುವಾದ: ಸಿ. ಪಿ. ರವಿಕುಮಾರ್ ೧ ಬೆಳ್ಳಗೆ, ಬೃಹದಾಕಾರ, ಆನೆಯೊಂದು ನಿಲ್ಲಬಹುದಾದಷ್ಟು ದೊಡ್ಡ ಸಂಖ್ಯೆಗಳುಳ್ಳ ಅಪ್ಪನ ಕಡೆಯ ಫೋನ್. ಅದನ್ನು ಅವನು ಬಳಸಿದ್ದು ಅಷ್ಟಕ್ಕಷ್ಟೇ ತಾನು ಮಾತಾಡಬೇಕಾದಾಗ ಮನೆಗೇ ಹೋಗಿ ಮಾತಾಡುವುದು ಅವನ ಪದ್ಧತಿ. ಯಾರೋ ಫೋನ್ ಮಾಡಿದಾಗ ಟಿವಿ ಮೇಲೆ ಕುದುರೆ ರೇಸ್ ನೋಡುತ್ತಾ ಕುಳಿತಿರುತ್ತಿದ್ದ.  ಅಥವಾ ಹೊರಗೆ ಹೊರಡಲು ನಡೆಸುತ್ತಿದ್ದ ಸಿದ್ಧತೆ. ಫ್ರಾನ್ಸ್ ನಲ್ಲಿ ಒಂದು ಸಂಜೆ  ಇದೇ ಫೋನ್ ಬಳಸಿ ಒಮ್ಮೆಲೇ ಕರೆ ಮಾಡಿದ ಸಾಯುವ ಮೂರು ದಿವಸಗಳ ಮುನ್ನ. ನಾನು ಬೇಸಗೆ ರಜಕ್ಕೆ ಬಂದಾಗ ಎಲ್ಲೆಲ್ಲಿ ಹೋಗಬಹುದು ಎಂದೆಲ್ಲಾ ಮಾತಾಡಿದ, ಮುಚ್ಚಿಡಲಾಗದೆ ಉತ್ಸಾಹವನ್ನ. ಈಗ ಅದೇ ಫೋನಿನ ರಿಸೀವರ್ ಹಿಡಿದು ಕೇಳಿಸಿಕೊಂಡಾಗ: ಸ್ಮಶಾನ ಮೌನ. ಅವನು ಕೇಳಿಸಿಕೊಳ್ಳುತ್ತಿರಬಹುದೆಂಬ ಕಲ್ಪನಾಯಾನ.  ನಾನು ಕಲ್ಪಿಸಿಕೊಳ್ಳುತ್ತೇನೆ ಸಂಖ್ಯೆಗಳ ಸರಣಿ. ನೀವು ಕರೆ ಮಾಡಿದ ವ್ಯಕ್ತಿ ವ್ಯಾಪ್ತಿಯ ಹೊರಗಿದ್ದಾರೆ ಎನ್ನುತ್ತದೆ ಅಶರೀರವಾಣಿ. ೨ ಎರಡು ನಿಮಿಷಕ್ಕಿಂತಲೂ ಹೆಚ್ಚು ಮಾತಾಡುವುದಿದ್ದರೆ  ಪತ್ರ ಬರೆಯುವುದೇ ಸರಿ ಎಂದು ಸಿಡಿಮಿಡಿಗೊಳ್ಳುತ್ತಿದ್ದ. ನಾವು ಹದಿಹರೆಯದಲ್ಲಿದ್ದಾಗ ಅವನ ಸಿಡಿಮಿಡಿಗೆ ಹೆದರಿ ಜಗಳವೇತಕ್ಕೆ ವ್ಯರ್ಥ ಎಂದು ನಮ್ಮ ಫೋನ್ ಕರೆಗಳು  ಎಷ್ಟು ಬೇಕೋ ಅಷ್ಟು, ಸಂಕ್ಷಿಪ್ತ. ಈಗ ಅವನೊಂದಿಗೆ ಮಾತಾಡಬೇಕೆಂಬ ಹಂಬಲವಾದಾಗ ಟೆಲಿಪೋನ್ ಕಡೆಗೆ ದಿಟ್ಟಿಸಿ ನೋಡಿ  ಬ...

ಕಾಡುಜೀವಿಗಳ ಶಾಂತಿ

ಇಮೇಜ್
  ಮೂಲ: ವೆಂಡೆಲ್ ಬೆರಿ  ಕನ್ನಡ ಅನುವಾದ: ಸಿ ಪಿ ರವಿಕುಮಾರ್  ಜಗತ್ತಿಗಾಗಿ ಹತಾಶೆ ಬೆಳೆಬೆಳೆದು ಆಕ್ರಮಿಸಿಕೊಂಡಾಗ ಮನವನ್ನು ಏನಾದೀತೋ ನನ್ನ ಬದುಕು, ಮಕ್ಕಳ ಬದುಕೆಂಬ ಭಯಕ್ಕೆ ಇರುಳಿನಲ್ಲಿ ಸಣ್ಣ ಸದ್ದಿಗೂ ಎಚ್ಚರವಾದಾಗ ನಾನು ಮೇಲೆದ್ದು ಹೋಗಿ ಅಡ್ಡಾಗುತ್ತೇನೆ  ಕಾಡು ಬಾತುಕೋಳಿ ತನ್ನ ಚೆಲುವನ್ನು ಹೊದ್ದು ಮಲಗಿರುತ್ತದಲ್ಲ ನೀರಿನಲ್ಲಿ ಮತ್ತು  ಕೊಕ್ಕರೆ ಮೀನು ಹಿಡಿಯುತ್ತದಲ್ಲ, ಅಲ್ಲಿ. ಅಲ್ಲಿ ನಾನು ಅನುಭವಿಸುತ್ತೇನೆ ಕಾಡುಜೀವಿಗಳ ಶಾಂತಿ. ಮುಂಬರುವ ಶೋಕವನ್ನು ನೆನೆದು  ತಳಮಳಗೊಳ್ಳದ ಅವುಗಳ ಸ್ಥಿತಿ. ಸ್ತಬ್ಧ ನೀರಿನ ಉಪಸ್ಥಿತಿಯಲ್ಲಿ ಅರಿವಾಗುತ್ತದೆ ಹಗಲುಗುರುಡು ನಕ್ಷತ್ರಗಳು ಬೆಳಕು ಹಿಡಿದು ಕಾಯುತ್ತಿರುವುದು. ಒಂದಿಷ್ಟು ಹೊತ್ತು  ಜಗತ್ತಿನ ಕೃಪೆಯಲ್ಲಿ ವಿಶ್ರಮಿಸಿದಾಗ ನನಗೆ ದೊರೆಯುತ್ತದೆ ಮುಕ್ತಿ. (ಮುಂದಿನ ಕ್ಷಣವೇ  ಹುಲಿ ಸಿಂಹ ತೋಳ ನರಿ ಮುಂತಾದ ಯಾವುದೋ ಪ್ರಾಣಿ ತನ್ನನ್ನು ಕೊಂದು ತಿನ್ನಬಹುದೆಂಬ ಅರಿವಿದ್ದರೂ ಶಾಂತಿಯಿಂದ ಬದುಕುವ ಜಿಂಕೆ ಮುಂತಾದ ಪ್ರಾಣಿಗಳಿಗೆ ಯಾವ ಆತಂಕವೂ ಇಲ್ಲ. ಅದನ್ನೇ ಕವಿ ಕಾಡು ಜೀವಿಗಳ ಶಾಂತಿ ಎನ್ನುತ್ತಾನೆ.)

ಭರವಸೆ

ಇಮೇಜ್
 ಮೂಲ: ರೋಸ್ ಮೆರಿ ವಾಹ್ತೋಲಾ ಟ್ರಾಮರ್ ಅನುವಾದ: ಸಿ ಪಿ ರವಿಕುಮಾರ್  ಭರವಸೆಯ ಕಿಸೆಗಳಲ್ಲಿವೆ ಸಣ್ಣ ರಂಧ್ರಗಳು ಕೆಳಗೆ ಉದುರುವ  ತುಣುಕುಗಳು ಮೂಡಿಸುತ್ತವೆ ನಮಗೆ ಆತಂಕವಾದಾಗ ಅನುಸರಿಸಲು ದಾರಿ. ಭರವಸೆಯ ಗುಟ್ಟು ಏನೆಂದರೆ ಅದಕ್ಕೆ ಗೊತ್ತೇ ಇಲ್ಲ ಯಾವುದು ಗುರಿ. ಅದಕ್ಕೆ ಗೊತ್ತಿರುವುದು ಇಷ್ಟೇ, ಪ್ರತಿಯೊಂದು ದಾರಿಯ ಪ್ರಾರಂಭವೂ ಒಂದು ಹೆಜ್ಜೆಯ ಮುಂದೆ  ಇನ್ನೊಂದನ್ನು ಇಟ್ಟಾಗ ಎಂದಷ್ಟೇ.