ಇತಿಹಾಸಕ್ಕೆ ವಿದಾಯ


ಸಿ ಪಿ ರವಿಕುಮಾರ್ 


ಯಾರಾದರೂ ನನ್ನನ್ನು ಮಾಡಿದರೆ ಶಿಕ್ಷಣ ಸಚಿವ
ತಕ್ಷಣ ಮಾಡುವೆನು ಒಂದು ಅತಿಮುಖ್ಯ ಕೆಲಸ!
ಸಿಲಬಸ್ ಪುಸ್ತಕದಿಂದ ಹೊಡೆಸಿಹಾಕಿಬಿಡುವೆ
ಹಿಸ್ಟರಿ, ಚರಿತ್ರೆ, ಇತಿಹಾಸ.
ಆಗುವುದೇ ಇಲ್ಲ ಆಗ ಇತಿಹಾಸದ ಪುನರಾವರ್ತನೆ
ಮಾಯವೇ ಆಗಿಬಿಡುವುದು ದ್ವೇಷ. 


ಮಾಗದಂತೆ ಎಂದೂ ನೂರಾರು ವರ್ಷದ ಗಾಯ
ಕಿತ್ತುತ್ತಲೇ ಇರುವ ಇತಿಹಾಸದ ಪಾಠಗಳು!
ಎಂದೋ ಉರಿದ ಅಗ್ನಿಗೆ ಇನ್ನಷ್ಟು
ಉರುವಲನ್ನಿಟ್ಟು ಕೆದಕುವ ಈ ಆಟಗಳು!

ಹಳೆಯ ತಪ್ಪುಗಳನ್ನು ಮತ್ತೆ ಮಾಡದೇ ಇರುವುದು
ಇತಿಹಾಸದಿಂದ ಕಲಿಯಬೇಕಾದ ಪಾಠ.
ನಮಗಿಲ್ಲ ಅದಕ್ಕೆ ಬೇಕಾದ ತಾಳ್ಮೆ ಮತ್ತು ತಯಾರಿ
ಆದ್ದರಿಂದ ಹೇಳೋಣ ಇತಿಹಾಸಕ್ಕೆ ಟಾಟಾ.


-- ಸಿ ಪಿ ರವಿಕುಮಾರ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಬಾರಿಸು ಕನ್ನಡ ಡಿಂಡಿಮವ" - ಒಂದು ಮರು ಓದು

ಕರ್ನಾಟಕ ನಾಡಗೀತೆ - ಒಂದು ಸರಳ ಅರ್ಥವಿವರಣೆ

ಆಡು ಮುಟ್ಟದ ಸೊಪ್ಪಿಲ್ಲ (ಹರಟೆ)