ಹತ್ತು ಉರ್ದು ಶೇರ್

Empty Gray Concrete Road
೧ 
ಮುಳ್ಳಿಂದಲೇ ತೆಗೆದೆ ಕಾಲಿಗೆ ಚುಚ್ಚಿದ ಮುಳ್ಳು
ಏಕೆಂದರೆ ನೋಡಿ ಹೂವಿಗೆ ಬರಗಾಲ ಎಲ್ಲೆಲ್ಲೂ
(ಆಕೀಲ್ ಶಾದಾಬ್)

ಹೇಗೆ ಬದುಕಿದ್ದೇನೆ ಭೂಮಿಯ ಮೇಲೆ ಗೊತ್ತೇ?
ಶತ್ರುವಿನ ಮನೆಯಲ್ಲಿ ಅತಿಥಿ ರಾತ್ರಿ ಕಳೆದಂತೆ
(ಭಗವಾನ್ ದಾಸ್ ಏಜಾಜ್)

ಮನೆಯಲ್ಲೇ ಆಗುಬಹುದು ಭಗವಂತನ ದರ್ಶನ
ಮಕ್ಕಳೊಂದಿಗೆ ಮಗುವಾಗಿ ಆಡಿದರೆ ಎರಡು ಕ್ಷಣ
(ಬಿಸ್ಮಿಲ್ ನವಶ್ ಬಂದಿ )

ಎಲ್ಲರ ಮನೆಗೆ ಹೋಗಿ ಕೊಚ್ಚುತ್ತಾರಲ್ಲ ಅವರಿವರ ಬಗ್ಗೆ ಹರಟೆ ಗಮ್ಮತ್ತು
ತಮ್ಮ ಮನೆಯಲ್ಲೇ ಅವರಿಗೆ ಸಿಕ್ಕುವುದಿಲ್ಲ ಸವಕಲು ಕಾಸಿನ ಕಿಮ್ಮತ್ತು
(ಅಸಿಮ್ ಶಹನಾಜ್ ಶಿಬ್ಲಿ)

ಪ್ರತಿಯೊಂದು ವಿಷಯಕ್ಕೂ ಹಿಂದೂ ಮುಸ್ಲಿಂ ಎನ್ನುವೆಯಲ್ಲ ಕರ್ಮ!
ಗೊತ್ತಿಲ್ಲವೇ ನಿನಗೆ ಸುಂದರಿ, ಪ್ರೇಮವೆಂಬುದೇ ಬೇರೆ ಧರ್ಮ
(ಜಮಾಲುದ್ದೀನ್ ಆಲಿ)

ಹೇಗೆ ಕೂಡಿಬಂದೀತು ಮಾತು? ಪ್ರತಿಯೊಂದೂ ಇಜ್ಜೋಡು
ಕಣ್ಣಿಗಿಂತಲೂ ದೊಡ್ಡದು ಕನಸು, ನಿದ್ದೆಗಿಂತ ರಾತ್ರಿಯೇ ದೊಡ್ಡದು
(ಶಾಹಿದ್ ಮೀರ್)

ತೆರಳುವ ಮುನ್ನ ಕಾಲ ಉಳಿಸುವುದು ನೆನಪು ಮಾತ್ರ ಹಲವಾರು
ಹಾರಿಹೋದರೂ ಹಕ್ಕಿ ಉಳಿದಂತೆ ಪಂಜರದಲ್ಲದರ ನೆರಳು
(ನರೇಶ್)

ಕಿಸೆ ಖಾಲಿಯಾದಾಗ ಹೇಗೆ ತೆಪ್ಪಗಾಗುತ್ತಾನೆ ಮನುಷ್ಯ
ನೀರಿಲ್ಲದೇ ಹೋದಾಗ ಹೇಗೆ ತೆಪ್ಪಗಾಗುತ್ತದೋ ಮತ್ಸ್ಯ
(ಜಹೀರ್ ಆತಿಶ್)

ಬದುಕಿನುದ್ದಕ್ಕೂ ದೊಡ್ಡ ಮರಗಳನ್ನೇ ಹುಡುಕುತ್ತ ಹಾರಾಡಿದ ಹಕ್ಕಿ
ಯಾವುದೋ ಬಳ್ಳಿಯ ತೊಡರಿನಲ್ಲಿ ನೆನ್ನೆ ಅದರ ಮೃತದೇಹ ಸಿಕ್ಕಿ
(ಅಖ್ತರ್ ನಜ್ಮಿ)
೧೦
ಬದುಕಿನ ಓಟ ಜಂಜಾಟದಲ್ಲಿ ಉಳಿದುಕೊಂಡಿದ್ದ ಈ ಎರಡು ಸಾಲು
ಅದನ್ನೂ ತೊಗೊಂಡು ಹೋಗಿ ಸಂತೋಷವಾಗಿರು ಎಲ್ಲಾದರೂ
(ಜಮೀಲುದ್ದೀನ್ ಆಲಿ)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಬಾರಿಸು ಕನ್ನಡ ಡಿಂಡಿಮವ" - ಒಂದು ಮರು ಓದು

ಕರ್ನಾಟಕ ನಾಡಗೀತೆ - ಒಂದು ಸರಳ ಅರ್ಥವಿವರಣೆ

ಆಡು ಮುಟ್ಟದ ಸೊಪ್ಪಿಲ್ಲ (ಹರಟೆ)