ಸಿ ಪಿ ರವಿಕುಮಾರ್ - ಕನ್ನಡ ಬರಹಗಳು
ನನ್ನ ಇತರ ಬ್ಲಾಗ್ ಬರಹಗಳನ್ನೂ ನೋಡಿ -
http://cp-ravikumar-kannadapoems2english.blogspot.com/
http://cp-ravikumar-english.blogspot.com/
http://cpravikumar-hindi.blogspot.com/
http://seepisampada.blogspot.com/
ಕವಿತೆ
ಲಿಂಕ್ ಪಡೆಯಿರಿ
Facebook
X
Pinterest
ಇಮೇಲ್
ಇತರ ಅಪ್ಲಿಕೇಶನ್ಗಳು
ವಿಯೋಗಿಯೇ ಆಗಿರಬೇಕು ಮೊದಲ ಕವಿ ವ್ಯಾಕುಲತೆಯಲ್ಲೇ ಹುಟ್ಟಿರಬಹುದು ಗೀತೆ ನಯನಗಳಿಂದ ಹೊರಟು ಮೌನವಾಗಿ ಅರಿವಿಲ್ಲದೇ ಹರಿದ ಧಾರೆಯೇ ಕವಿತೆ - ಸುಮಿತ್ರಾನಂದನ್ ಪಂತ್ ಕನ್ನಡಕ್ಕೆ - ಸಿ. ಪಿ. ರವಿಕುಮಾರ್
ಸಿ. ಪಿ. ರವಿಕುಮಾರ್ ಕರ್ನಾಟಕ ನಾಡಗೀತೆಯನ್ನು ಹಾಡುವವರಿಗೆ/ಕೇಳುವವರಿಗೆ ಅದರ ಅರ್ಥ ತಿಳಿಯದೇ ಇದ್ದರೆ ಈ ಬ್ಲಾಗ್ ಬರಹವನ್ನು ಅವರು ಓದಬಹುದು. ಆದಷ್ಟೂ ಸರಳವಾಗಿ ಕವಿತೆಯ ಸಾರವನ್ನು ಹಿಡಿದಿಡಲು ಪ್ರಯತ್ನಿಸಿದ್ದೇನೆ. ಈ ವಿಶಿಷ್ಟ ಕವಿತೆಯಲ್ಲಿ ಕುವೆಂಪು ಭಾರತವನ್ನು ತಾಯಿಯಂತೆ ಮತ್ತು ಕರ್ನಾಟಕವನ್ನು ಮಗಳಂತೆ ಕಲ್ಪಿಸಿಕೊಂಡಿದ್ದಾರೆ. ಇದನ್ನು ಅವರು ರಚಿಸಿದ್ದು ತಮ್ಮ ಹದಿಹರೆಯದಲ್ಲಿ. ಭಾರತಮಾತೆಯ ಮಗಳಾದ ಕರ್ನಾಟಕಮಾತೆಗೆ ಜಯವಾಗಲಿ ಎಂದು ನಾಡಗೀತೆ ಪ್ರಾರಂಭವಾಗುತ್ತದೆ. ಇಡೀ ಗೀತೆಯ ಉದ್ದಕ್ಕೂ ಅತ್ತ ಭಾರತಮಾತೆಯ ಹಿರಿಮೆ, ಇತ್ತ ಕರ್ನಾಟಕಮಾತೆಯ ಹಿರಿಮೆ ಇವುಗಳನ್ನು ಒಟ್ಟಿಗೆ ಕೊಂಡಾಡುವ ವಿಶಿಷ್ಟ ಪ್ರಯೋಗವನ್ನು ಕುವೆಂಪು ಮಾಡಿದ್ದಾರೆ. ರಾಷ್ಟ್ರವನ್ನೂ ಮತ್ತು ರಾಜ್ಯವನ್ನೂ ಏಕಕಾಲದಲ್ಲಿ ಸ್ತುತಿಸುವ ನಾಡಗೀತೆಯನ್ನು ಮತ್ತೊಮ್ಮೆ ಕೇಳಿ. ಜೈ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ! ಇಲ್ಲಿ ಕುವೆಂಪು ಭಾರತವನ್ನು ತಾಯಿಯಂತೆ ಮತ್ತು ಕರ್ನಾಟಕವನ್ನು ಮಗಳಂತೆ ಕಲ್ಪಿಸಿಕೊಂಡಿದ್ದಾರೆ. ಭಾರತಮಾತೆಯ ಮಗಳಾದ ಕರ್ನಾಟಕಮಾತೆಗೆ ಜಯವಾಗಲಿ ಎಂದು ನಾಡಗೀತೆ ಪ್ರಾರಂಭವಾಗುತ್ತದೆ. ಇಡೀ ಗೀತೆಯ ಉದ್ದಕ್ಕೂ ಅತ್ತ ಭಾರತಮಾತೆಯ ಹಿರಿಮೆ, ಇತ್ತ ಕರ್ನಾಟಕಮಾತೆಯ ಹಿರಿಮೆ ಇವುಗಳನ್ನು ಒಟ್ಟಿಗೆ ಕೊಂಡಾಡುವ ವಿಶಿಷ್ಟ ಪ್ರಯೋಗವನ್ನು ಕುವೆಂಪು ಮಾಡಿದ್ದಾರೆ. ರಾಷ್ಟ್ರವನ್ನೂ ಮತ್ತು ರಾಜ್ಯವನ್ನೂ ಏಕಕಾಲದಲ್ಲ...
ಸಿ ಪಿ ರವಿಕುಮಾರ್ "ಬಾರಿಸು ಕನ್ನಡ ಡಿಂಡಿಮವ" ಎನ್ನುವುದು ಕನ್ನಡ ಪ್ರಚಾರಗೀತೆ ಎನ್ನುವಂತೆ ಮೇಲ್ನೋಟಕ್ಕೆ ತೋರುತ್ತದೆ. ಆದರೆ ಕವಿತೆಯನ್ನು ಪೂರ್ಣವಾಗಿ ಓದಿದರೆ ಅದು ಕುವೆಂಪು ಅವರು ಕನ್ನಡಿಗರ ಜಾಯಮಾನಕ್ಕೆ ನೊಂದು, ಬದಲಾವಣೆಗಾಗಿ ಪ್ರಾರ್ಥನಾರೂಪದಲ್ಲಿ ಬರೆದ ಪದ್ಯ ಎಂಬ ತಿಳುವಳಿಕೆ ಮೂಡುತ್ತದೆ. ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ! ಕರ್ನಾಟಕದ ಹೃದಯ ಮಿಡಿಯಬೇಕಾದದ್ದು ಕನ್ನಡಕ್ಕೆ. ಆದರೆ ಅಲ್ಲಿ ಬೇರೆ ಭಾಷೆಗಳ ಮಿಡಿತವೇ ಹೆಚ್ಚು. ಕುವೆಂಪು ಅವರ ಕಾಲದಲ್ಲೂ ಇದು ಹಾಗೇ ಇತ್ತು, ಈಗಲೂ ಹಾಗೇ ಇದೆ! ಹೇಗೆ ಶಿವ ತನಗೆ ಸಹಜವಾದ ಡಿಂಡಿಮ ಬಾರಿಸಬೇಕೋ ಹಾಗೇ ಕರ್ನಾಟಕದ ಹೃದಯ-ಶಿವ ಕನ್ನಡವೆಂಬ ಡಿಂಡಿಮ ಬಾರಿಸಬೇಕು ಎಂಬುದು ಕವಿಯ ನೊಂದ ಮನದ ಮೊರೆ. "ಬಾರಿಸು ಕನ್ನಡ ಡಿಂಡಿಮವ "ಎಂಬಲ್ಲಿ "ಕನ್ನಡ" ಶಬ್ದಕ್ಕೆ ಒತ್ತು. ಸತ್ತಂತಿಹರನು ಬಡಿದೆಚ್ಚರಿಸು! ಕಚ್ಚಾಡುವರನು ಕೂಡಿಸಿ ಒಲಿಸು! ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು! ಒಟ್ಟಿಗೆ ಬಾಳುವ ತೆರದಲಿ ಹರಸು! ಕನ್ನಡ ಜನರಲ್ಲಿ ಒಗ್ಗಟ್ಟಿಲ್ಲ ಎನ್ನುವುದನ್ನು ಕುವೆಂಪು ಮನಗಂಡಿದ್ದರು. ಏಕೀಕರಣದ ಸಮಯದಲ್ಲಿ ಕೂಡಾ ಒಡಕು ಧ್ವನಿಗಳಿದ್ದವು. "ಅಖಂಡ ಕರ್ನಾಟಕ" ಪದ್ಯದಲ್ಲಿ ಇಂಥ ಒಡಕು ಧ್ವನಿಗಳನ್ನು ಎತ್ತುವ ಜನನಾಯಕರ ಬಗ್ಗೆ ಕುವೆಂಪು "ಮುಚ್ಚು ಬಾಯಿ" ಎಂಬ ರೀತಿಯಲ್ಲಿ ಗುಡುಗಿದ್ದಾರೆ. ಆದರೆ ...
ಮೂಲ: ಮಹಾತ್ಮಾ ಕಬೀರ್ ಕನ್ನಡ ಭಾವಾನುವಾದ: ಸಿ.ಪಿ. ರವಿಕುಮಾರ್ ಇಸವಿ ೧೩೯೮. ಇಂದಿನ ಕಾಶಿಗೆ (ಬನಾರಸ್) ಹತ್ತಿರದಲ್ಲಿರುವ ಲಹರ್ತಾರಾ ಎಂಬ ಸ್ಥಳದಲ್ಲಿ ಒಬ್ಬ ಬ್ರಾಹ್ಮಣ ವಿಧವೆಯ ಹೊಟ್ಟೆಯಲ್ಲಿ ಒಂದು ಗಂಡು ಮಗು ಜನಿಸಿತು. ಸಮಾಜದ ನಿಂದೆಗೆ ಹೆದರಿದ ಆಕೆ ಮಗುವನ್ನು ತೊರೆದು ಹೋದಳು. ನೀರೂ ಮತ್ತು ನೀಮಾ ಎಂಬ ಬಡ, ಅನಕ್ಷರಸ್ಥ ಮುಸಲ್ಮಾನ ದಂಪತಿಗಳು ಈ ಮಗುವನ್ನು ಸಾಕಿದರು. ಈ ಮಗುವೇ ಮುಂದೆ ಮಹಾತ್ಮಾ ಕಬೀರ್ ಎಂಬ ಹೆಸರಿನಿಂದ ಪ್ರಖ್ಯಾತವಾಯಿತು. ಸಾಕು ತಂದೆ ತಾಯಿಯರು ವೃತ್ತಿಯಲ್ಲಿ ನೇಕಾರರು. ಈ ಮಗುವನ್ನು ಸಂತ ರಾಮಾನಂದರು ಶಿಷ್ಯನನ್ನಾಗಿ ಸ್ವೀಕರಿಸಿದರು. ಶ್ರೀ ರಾಮಾನಂದರು ದೇಹತ್ಯಾಗ ಮಾಡಿದಾಗ ಕಬೀರನಿಗೆ ೧೩ ವರ್ಷ ವಯಸ್ಸು. ಕಬೀರನಿಗೆ ದೊರೆತ ಶಿಕ್ಷಣ ಯಾವ ಬಗೆಯದು ಎಂಬುದರ ಬಗ್ಗೆ ಹೆಚ್ಚು ಮಾಹಿತಿಯಿಲ್ಲ. ಅವನು ಸನ್ಯಾಸ ಸ್ವೀಕರಿಸಲಿಲ್ಲ. ಒಬ್ಬ ಗೃಹಸ್ಥನಾಗಿ, ನೇಕಾರನಾಗಿ, ಚಿಂತಕನಾಗಿ ಸಮನ್ವಯದ ಬದುಕನ್ನು ಜೀವಿಸಿದ. ಭಗೋದಾಸ ಮತ್ತು ದರ್ಮದಾಸ ಎಂಬ ಅವನ ಇಬ್ಬರು ಶಿಷ್ಯರು ಅವನ ವಾಣಿಯನ್ನು ಬರೆದಿಟ್ಟರು ಎಂಬ ಪ್ರತೀತಿ ಇದೆ. ಆದರೆ ಅವನ ದ್ವಿಪದಿಗಳು ಮತ್ತು ಭಜನೆಗಳು ಬಾಯಿಂದ ಬಾಯಿಗೆ ಸಾಗಿ ಬಂದಿದ್ದೆ ಹೆಚ್ಚು. ಅವನ ದ್ವಿಪದಿಗಳನ್ನು ಶ್ಲೋಕಗಳೆಂದೂ, ಸಾಖಿಗಳೆಂದೂ ಕರೆಯುತ್ತಾರೆ. ಸಾಖಿ ಎಂದರೆ ಸಾಕ್ಷಿ. ಅವನ ಅನುಯಾಯಿಗಳಿಗೆ ಅವನ ವಾಣಿ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ