ನೆರವಿಗಿರುತಿರಲು ಜಾನಕಿನಾಥ

(ತುಲಸೀದಾಸರ ರಚನೆಯ ಅನುವಾದ)

"ಜಾನಕಿನಾಥ ಸಹಾಯ ಕರೇ..." ಎಂದು ಪ್ರಾರಂಭವಾಗುವ ತುಲಸೀದಾಸರ ಈ ರಚನೆಯನ್ನು ಅನೇಕ ಹಾಡುಗಾರರು ಹಾಡಿದ್ದಾರೆ.  ಈ ಜನಪ್ರಿಯ ರಚನೆಯ ಅನುವಾದವನ್ನು ಕೆಳಗೆ ಪ್ರಯತ್ನಿಸಿದ್ದೇನೆ.  ಶ್ರೀರಾಮನ ಪರಮಭಕ್ತರಾಗಿದ್ದ ತುಲಸೀದಾಸರು ತಮ್ಮ ಸುಲಲಿತ ಶೈಲಿಯಲ್ಲಿ ರಾಮನನ್ನು ಸ್ತುತಿಸಿದ್ದಾರೆ. ಯಾರ ನೆರವಿಗೆ ಸಾಕ್ಷಾತ್ ಶ್ರೀರಾಮನೇ ಇದ್ದಾನೋ ಅವನಿಗೆ ಯಾರೂ ಏನೂ ಮಾಡಲಾರರು ಎಂಬುದು ಕವಿಯ ಸಂದೇಶ. ಗ್ರಹಣಕಾಲದಲ್ಲಿ ರಾಹು-ಕೇತುಗಳಿಗೆ ಹೆದರುವ ಜನರಿಗೆ ಈ ರಚನೆ ಸಾಂತ್ವನ ನೀಡಬಹುದು. 

Photo of a Lighted Candle

ನೆರವಿಗಿರುತಿರಲು ಜಾನಕಿನಾಥ ಬರದು ನಿನ್ನ ಬಳಿ ಯಾವ ವಿಪತ್ತು ।।

ತರುವರು ಶುಭಫಲ  ರವಿ ಶಶಿ ಮಂಗಳ,  ಗುರು ಭೃಗುಸುತ  ಬುಧ ವರಗಳನಿತ್ತು ।
ಇರದು ಗಮ್ಯತೆಯು ರಾಹುಕೇತುವಿಗೆ, ಸರಿವನು ಶನಿ ಹೆಜ್ಜೆಯ ಹಿಂದಿಟ್ಟು ।।

ದುರುಳ ದುಶ್ಶಾಸನ ವಿಮಲ ದ್ರೌಪದಿಯ ಸೀರೆಯನೆಳೆಯಲು ಸಾಹಸಪಟ್ಟು ।
ಪೊರೆಯಲು ಕರುಣಾನಿಧಿ ಬರಲಿಲ್ಲವೇ ಹರಿದು ಮೋಡ ಬರುವಂತೆ  ಸವಿತೃ ।।

ಯಾರ ಪರವೋ ಕರುಣಾನಿಧಿ ಜಗದೊಳು ತೆರೆವುದು ಅವರಿಗೆ ಭಾಗ್ಯಜಗತ್ತು ।
ಎರಗುವೆ ತುಲಸೀದಾಸ ರಘುವರನ ಸುಖದಾಯಿ ಚರಣಕೆ ಯಾವತ್ತೂ  ।।


ಮೂಲ ರಚನೆ:

जानकी नाथ सहाय करें जब कौन बिगाड़ करे नर तेरो ॥

सुरज मंगल सोम भृगु सुत बुध और गुरु वरदायक तेरो ।
राहु केतु की नाहिं गम्यता संग शनीचर होत हुचेरो ॥

दुष्ट दु:शासन विमल द्रौपदी चीर उतार कुमंतर प्रेरो ।
ताकी सहाय करी करुणानिधि बढ़ गये चीर के भार घनेरो ॥

जाकी सहाय करी करुणानिधि ताके जगत में भाग बढ़े रो ।
रघुवंशी संतन सुखदायी तुलसीदास चरनन को चेरो ॥

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಬಾರಿಸು ಕನ್ನಡ ಡಿಂಡಿಮವ" - ಒಂದು ಮರು ಓದು

ಕರ್ನಾಟಕ ನಾಡಗೀತೆ - ಒಂದು ಸರಳ ಅರ್ಥವಿವರಣೆ

ಆಡು ಮುಟ್ಟದ ಸೊಪ್ಪಿಲ್ಲ (ಹರಟೆ)