ಪೋಸ್ಟ್‌ಗಳು

ಉರ್ದೂ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಇಶ್ರತ್ ಏ ಕತರಾ ಹೈ ದರಿಯಾ ಮೇ ಫನಾ ಹೋ ಜಾನಾ

ಇಮೇಜ್
ಮೂಲ - ಮಿರ್ಜಾ ಗಾಲಿಬ್  ಕನ್ನಡಕ್ಕೆ - ಸಿ. ಪಿ. ರವಿಕುಮಾರ್  ('ಇಶ್ರತ್ ಏ ಕತರಾ ಹೈ ದರಿಯಾ ಮೇ ಫನಾ ಹೋ ಜಾನಾ'  - ಗಾಲಿಬ್ ಅವರ ಈ ಗಜಲ್ ಅನೇಕ ಗಾಯಕರಿಂದ ಹಾಡಲ್ಪಟ್ಟಿದೆ. ಕರ್ನಾಟಕ ಗಾಯನ ಶೈಲಿಯಲ್ಲಿ ಎಂ. ಎಸ್. ಸುಬ್ಬುಲಕ್ಷ್ಮಿಯವರೂ ಇದನ್ನು ಹಾಡಿದ್ದಾರೆ!  ತನ್ನ ಪ್ರೇಮಿಕೆಯಿಂದ ಯಾವುದೋ ಕಾರಣದಿಂದ ಬೇರಾದ ಪ್ರೇಮಿಯೊಬ್ಬನ ಅಳಲು ಈ ಕವಿತೆಯಲ್ಲಿದೆ.) ಸಿಂಧುವಿನಲ್ಲಿ ಕೊನೆಗಾಣುವುದರಲ್ಲಿದೆ ಬಿಂದುವಿನ ಆನಂದ ತಿಂದ ನೋವು ಮಿತಿ ಮೀರಿದಾಗ ಅದೇ ಆಗುತ್ತದೆ ದಿವ್ಯೌಷಧ ಬೀಗ ಮತ್ತದರ ಕೀಲಿಯಂತಾಯಿತಲ್ಲ ನನ್ನ ನಿನ್ನ ಸಂಬಂಧ ಎಲ್ಲ ನೇರವಾಯಿತು ಎನ್ನುವಾಗ ಕಳಚಿ ಬಿದ್ದಿತು ಬಂಧ ಕಷ್ಟಗಳಿಗಿಂತಲೂ ಪರಿಹಾರಗಳಿಂದ  ತತ್ತರಿಸಿದೆ  ಎದೆ  ಗಂಟು ಬಿಡಿಸಲು ಹೋಗಿ ಎಲ್ಲಾ  ಗೋಜಲುಗೋಜಲಾಗಿದೆ  ದೈವವೇ! ಹಿಂಸೆಯಿಂದಲೂ ವಂಚಿತವಾಗುತ್ತಿದೆ  ಮನಸ್ಸು ತನ್ನ  ಆರಾಧಕನ  ಮೇಲೆ ಅವಳಿಗೇಕೆ ಇಷ್ಟೊಂದು ಸಿಟ್ಟು? ಬಿಸಿ ನಿಟ್ಟುಸಿರುಗಳು  ಕಂಬನಿಯ ಸ್ಥಳವನ್ನಾಕ್ರಮಿಸಿದಾಗ ನೀರೂ ಆವಿಯಾಗಬಹುದೆಂದು ನಂಬಿಕೆ ಬಂತು ಆವಾಗ ಮದರಂಗಿ ಚಿತ್ತಾರದ ನಿನ್ನ ಮೃದು ಹಸ್ತಗಳ ನೆನಪು ಎದೆಯಿಂದ ಬೇರ್ಪಡಿಸುವುದಿದೆಯಲ್ಲ, ಕಿತ್ತಂತೆ ಉಗುರು ನಿನ್ನ ಮನೆ ಓಣಿಯನು ತಲುಪಲೊಲ್ಲದ  ಕುಸುಮದ ಗಂಧ ಬೀಸುಗಾಳಿಗೆ ಕಾದು ಕುಳಿತಿದೆ ಏತಕೆ  ಧೂಳಿ...

ಗಡಿ

ಇಮೇಜ್
ಮೂಲ ಉರ್ದೂ : ಜಾಹೀದ್ ಇಮ್ರೋಜ್ (ಪಾಕೀಸ್ತಾನಿ ಯುವಕವಿ) ಕನ್ನಡಕ್ಕೆ: ಸಿ. ಪಿ. ರವಿಕುಮಾರ್ ಗಡಿಯ ಮೇಲೆ ಬರಿಹೊಟ್ಟೆಯಲ್ಲೇ ನಮಗೆ ಕಟ್ಟಲಾಗದು ಬೇಲಿ. ರಾತ್ರಿಗಳನ್ನು ಒಣಗಿಸಿಬಿಡುತ್ತದೆ ಹಸಿವು. ದಾಹ ತೀರಿಸದು ನಮ್ಮ ಕಣ್ಣೀರು. ಧಾರ್ಮಿಕ ಸಂಗೀತಕ್ಕೆ ರಣಗೀತೆಯ ರಾಗ ದೊರೆತಾಗ ಫಲವಂತಿಕೆಯಲ್ಲೂ ಬೆಳೆಯುತ್ತದೆ ಬರಗಾಲ. ಮಕ್ಕಳು ತಾಯಿಎದೆಯಿಂದ ರಕ್ತ ಹೀರತೊಡಗುತ್ತಾರೆ. ಮುಖಗಳ ಮೇಲೆ ಯಾರೂ ಬಾವುಟಗಳನ್ನು ತೊಡುವುದಿಲ್ಲ, ಸ್ವಾತಂತ್ರ್ಯದಿನದಂದು ಜನ ತಮ್ಮ ಸಂತೋಷವನ್ನು ಸುಡುತ್ತಾರೆ, ನಕ್ಷತ್ರಕಡ್ಡಿಯನ್ನಲ್ಲ. ಸಿಪಾಯಿಗಳು ಹೊಲ ನಾಶಮಾಡುವ ಯಂತ್ರಗಳೆಂಬ ಹಾಡನ್ನು ಸೇನೆಯು ಎಂದೂ ಗುಣುಗುಣಿಸುವುದಿಲ್ಲ. ಹೂವುಗಳು ನವವಧುವಿನ ಹೆರಳಲ್ಲಿ ಮತ್ತು ಮಕ್ಕಳ ಸಮವಸ್ತ್ರಗಳ ಮೇಲೆ ಮಾತ್ರ ಭೂಷಣವಾಗುತ್ತವೆಯೇ? ಗಡಿಗಳ ರೇಖೆಗಳನ್ನು ಗುರುತಿಸಲು ಮುಳ್ಳುತಂತಿಯ ಬದಲು ಹೂಗಿಡಗಳ ಸಾಲನ್ನು ಕಟ್ಟಲಾಗದೆ?

ಪ್ರತಿಬಿಂಬದ ಬಂಧನ

ಇಮೇಜ್
ಶಹರಿಯಾರ್ ಅವರ ಒಂದು ಗಜಲ್ ಭಾಷಾಂತರಿಸುವ ಸಾಹಸ ಇಲ್ಲಿದೆ.  ಅವರ ಇನ್ನೂ ಅನೇಕ ರಚನೆಗಳಂತೆ ಇಲ್ಲೂ ನಗರಜೀವನದ ಬಗ್ಗೆ ಒಂದಿಷ್ಟು ನೋಟಗಳಿವೆ. ನಗರದ ಜೀವನ ಒಂದು ಮರೀಚಿಕೆಯಂತೆ. ಮಾತಿನಲ್ಲಿ ಅದನ್ನು ಬಂಧಿಸಿಡುವುದು ಕೂಡಾ ಕಷ್ಟ.  ನಾವು ನಡೆಯುತ್ತಿದ್ದೇವೆಂಬ (ನಂಬಿಕೆಯ) ಹಾದಿ ಗಟ್ಟಿಯಾದದ್ದೆಂಬುದು ಒಂದು ಭ್ರಮೆ!  ಸ್ಮಾರ್ಟ್ ಸಿಟಿ ಎಂಬ ಕಲ್ಪನೆಯನ್ನೇ ತೆಗೆದುಕೊಳ್ಳಿ. ಈ ಅದ್ಭುತ ಕಲ್ಪನಾಲೋಕ ಎಂದಾದರೂ ನಿಜವಾದೀತೇ? ಅದರ ಸಾಧ್ಯತೆ ಕಡಿಮೆಯೇ ಎಂದು ನಮಗೆ ಗೊತ್ತಿದ್ದರೂ ನಾವು ಕನಸು ಕಾಣುವುದನ್ನು ಬಿಡುವುದಿಲ್ಲ!  ಮೂಲ ಉರ್ದೂ : ಶಹರಿಯಾರ್  ಕನ್ನಡ ಅನುವಾದ: ಸಿ. ಪಿ. ರವಿಕುಮಾರ್ ಪ್ರತಿಬಿಂಬವನ್ನು ಹಿಡಿದಿಡಲೇ,  ತೊಡಿಸಲೇ ನೆರಳಿಗೆ ಕಡಿವಾಣ? ಹೇಗೆ ಸಾಕ್ಷಾತ್ಕರಿಸಿಕೊಳ್ಳಲಿ ಮರೀಚಿಕೆಯನ್ನ? ಪದತಲದಲ್ಲಿ ಇದೆಯಲ್ಲ ಅದು ಗಟ್ಟಿನೆಲವೆಂದು   ನಡೆ ಇನ್ನೊಂದಿಷ್ಟು ದಿನ ಭ್ರಮೆಯನ್ನು ಹರಡೋಣ  ಭರವಸೆಗಳ ನಗರ ನಿಜವೇ ಆಗುವುದು ಸಾಧ್ಯವಿಲ್ಲ  ಎಂದಾದರೆ ಅದನ್ನು ಕಲ್ಪನೆಯಲ್ಲೇ ಹಿಡಿದಿಡೋಣ  ಹೆಚ್ಚೂ ಕಡಿಮೆ ಈಗ ಕಣ್ಣುಗಳಿಗೆ ಇರುವ ಕೆಲಸ ಒಂದೇ  ಕಂಡ ಕನಸುಗಳಿಗೆಲ್ಲಾ ಹುಡುಕುವುದು ಅರ್ಥವನ್ನ  ನೆನ್ನೆಯೆಷ್ಟಿತ್ತೋ ನನಗೆ ಇಂದೂ ಅಷ್ಟೇ ಇದೆ ಅಧೈರ್ಯ  ಯಾರ ತುಟಿಗಳ ಮೇಲೆ ಬರೆಯಲಿ ದಾಹವನ್ನ? ಸವೆಸೋಣ ಉಳಿದ ಬದುಕಿನ ...

ಹತ್ತು ಉರ್ದು ಶೇರ್

ಇಮೇಜ್
೧  ಮುಳ್ಳಿಂದಲೇ ತೆಗೆದೆ ಕಾಲಿಗೆ ಚುಚ್ಚಿದ ಮುಳ್ಳು ಏಕೆಂದರೆ ನೋಡಿ ಹೂವಿಗೆ ಬರಗಾಲ ಎಲ್ಲೆಲ್ಲೂ (ಆಕೀಲ್ ಶಾದಾಬ್) ೨ ಹೇಗೆ ಬದುಕಿದ್ದೇನೆ ಭೂಮಿಯ ಮೇಲೆ ಗೊತ್ತೇ? ಶತ್ರುವಿನ ಮನೆಯಲ್ಲಿ ಅತಿಥಿ ರಾತ್ರಿ ಕಳೆದಂತೆ (ಭಗವಾನ್ ದಾಸ್ ಏಜಾಜ್) ೩ ಮನೆಯಲ್ಲೇ ಆಗುಬಹುದು ಭಗವಂತನ ದರ್ಶನ ಮಕ್ಕಳೊಂದಿಗೆ ಮಗುವಾಗಿ ಆಡಿದರೆ ಎರಡು ಕ್ಷಣ (ಬಿಸ್ಮಿಲ್ ನವಶ್ ಬಂದಿ ) ೪ ಎಲ್ಲರ ಮನೆಗೆ ಹೋಗಿ ಕೊಚ್ಚುತ್ತಾರಲ್ಲ ಅವರಿವರ ಬಗ್ಗೆ ಹರಟೆ ಗಮ್ಮತ್ತು ತಮ್ಮ ಮನೆಯಲ್ಲೇ ಅವರಿಗೆ ಸಿಕ್ಕುವುದಿಲ್ಲ ಸವಕಲು ಕಾಸಿನ ಕಿಮ್ಮತ್ತು (ಅಸಿಮ್ ಶಹನಾಜ್ ಶಿಬ್ಲಿ) ೫ ಪ್ರತಿಯೊಂದು ವಿಷಯಕ್ಕೂ ಹಿಂದೂ ಮುಸ್ಲಿಂ ಎನ್ನುವೆಯಲ್ಲ ಕರ್ಮ! ಗೊತ್ತಿಲ್ಲವೇ ನಿನಗೆ ಸುಂದರಿ, ಪ್ರೇಮವೆಂಬುದೇ ಬೇರೆ ಧರ್ಮ (ಜಮಾಲುದ್ದೀನ್ ಆಲಿ) ೬ ಹೇಗೆ ಕೂಡಿಬಂದೀತು ಮಾತು? ಪ್ರತಿಯೊಂದೂ ಇಜ್ಜೋಡು ಕಣ್ಣಿಗಿಂತಲೂ ದೊಡ್ಡದು ಕನಸು, ನಿದ್ದೆಗಿಂತ ರಾತ್ರಿಯೇ ದೊಡ್ಡದು (ಶಾಹಿದ್ ಮೀರ್) ೭ ತೆರಳುವ ಮುನ್ನ ಕಾಲ ಉಳಿಸುವುದು ನೆನಪು ಮಾತ್ರ ಹಲವಾರು ಹಾರಿಹೋದರೂ ಹಕ್ಕಿ ಉಳಿದಂತೆ ಪಂಜರದಲ್ಲದರ ನೆರಳು (ನರೇಶ್) ೮ ಕಿಸೆ ಖಾಲಿಯಾದಾಗ ಹೇಗೆ ತೆಪ್ಪಗಾಗುತ್ತಾನೆ ಮನುಷ್ಯ ನೀರಿಲ್ಲದೇ ಹೋದಾಗ ಹೇಗೆ ತೆಪ್ಪಗಾಗುತ್ತದೋ ಮತ್ಸ್ಯ (ಜಹೀರ್ ಆತಿಶ್) ೯ ಬದುಕಿನುದ್ದಕ್ಕೂ ದೊಡ್ಡ ಮರಗಳನ್ನೇ ಹುಡುಕುತ್ತ ಹಾರಾಡಿದ ಹಕ್ಕಿ ಯಾವುದೋ ಬಳ್ಳಿಯ ತೊಡರಿನಲ್ಲಿ ನೆನ್ನೆ ಅದರ ಮೃತದೇಹ ಸಿಕ್ಕಿ...