ಪೋಸ್ಟ್‌ಗಳು

ಕನ್ನಡ ಸಾಹಿತ್ಯ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಸ್ಮರಣೆಯೊಂದೇ ಸಾಲದೇ?

ಇಮೇಜ್
ಗೆಳೆಯ ಸುಧೀಂದ್ರ ಕನ್ನಡ ಲೇಖಕರ ನೆನಪುಗಳನ್ನು ವಿಡಿಯೋ ಮೂಲಕ ಹಂಚಿಕೊಳ್ಳುತ್ತಿದ್ದಾನೆ. ಇದು ಬಹಳ ಸಂತೋಷದ ಸಂಗತಿ.  ಅವನು ನಿರಂಜನ ಮತ್ತು ಅನುಪಮಾ ಅವರನ್ನು ಕುರಿತು ಮಾತಾಡಿದ್ದು ಸ್ವಾರಸ್ಯಕರವಾಗಿದೆ. ಕೆಲವು ಖಾಸಗೀ ನೆನಪುಗಳನ್ನು ದಾಖಲಿಸುವ ಪ್ರಯತ್ನ ಇಲ್ಲಿದೆ. ನಿರಂಜನ ಮತ್ತು ಅನುಪಮಾ  ಅವರ ಸ್ಮರಣೆ ಎಂದಿಗೂ ಚೇತೋಹಾರಿ. ನಮ್ಮ ತಂದೆಗೆ ನಿರಂಜನ ಹತ್ತಿರದ ಗೆಳೆಯರು. ಒಂದು ಕಾಲದಲ್ಲಿ ಇಬ್ಬರೂ ಕನ್ನಡ ಪತ್ರಿಕೆಗಳಿಗೆ ಬರೆದವರು. ಆದರೆ ನನ್ನ ತಂದೆಯವರ ಒಲವು ಇಂಗ್ಲಿಷ್ ಬರವಣಿಗೆಯಲ್ಲಿ ಹೆಚ್ಚಿತ್ತು.  ನಿರಂಜನ ದಂಪತಿಗಳ ಮದುವೆಯಲ್ಲೂ ನಮ್ಮ ತಂದೆ ಒಂದು ಸಣ್ಣ ಪಾತ್ರ ವಹಿಸಿದ್ದರು.  ನನ್ನ ತಾಯಿಗೆ ಅನುಪಮಾ ಅವರು ಗೆಳತಿಯಾಗಿದ್ದರು. ಒಮ್ಮೆ ಅವರಿಗೆ ಚಿಕಿತ್ಸೆ ಕೂಡಾ ನೀಡಿದ್ದರು.  ನಮ್ಮ ತಂದೆ ದೆಹಲಿಗೆ ವರ್ಗವಾಗಿ ಹೋದಾಗ ಐದು  ವರ್ಷಗಳ ಕಾಲ ಸಂಪರ್ಕಗಳು ಕಡಿಮೆಯಾದವು. ಆಗ ಇಂದಿನಂತೆ  ಫೋನ್, ಸೋಷಿಯಲ್ ಮೀಡಿಯಾ ಇವೆಲ್ಲಾ ಇರಲಿಲ್ಲ. ಪತ್ರ ವ್ಯವಹಾರವೊಂದೇ ಆಗಿದ್ದ ಸಂಪರ್ಕ ಸಾಧನ!  ನಾವು ಮರಳಿ ಬೆಂಗಳೂರಿಗೆ ಬಂದಾಗ ಅವರು ನಮ್ಮ ತಂದೆಗೆ ವಿಮರ್ಶೆಗಾಗಿ ಕಳಿಸಿದ ಜ್ಞಾನಗಂಗೋತ್ರಿಯ ಸಂಪುಟಗಳನ್ನು ಓದುತ್ತಾ ನಾನು ಬೆಳೆದೆ. ಅಂಥ ದೊಡ್ಡ ಪ್ರಮಾಣದ ವಿಶ್ವಕೋಶದ ಸಂಪಾದನೆಯ ಹೊಣೆಯನ್ನು ಹೊರುವುದು ನಿರಂಜನ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಆದರೆ ಕೆಲಸದ ಒತ್ತಡ ಅವರ ಮೇಲೆ ಹೆಚ್ಚಾಯಿತು. ಸ...

ಕಳೆದುಹೋಗಿದೆ

ಸಿ. ಪಿ. ರವಿಕುಮಾರ್  "ಸಮ್ಮೇಳನದ ಗದ್ದಲದಲ್ಲಿ ಕಳೆದುಹೋಗಿದೆ, ದಯವಿಟ್ಟು ಅನೌನ್ಸ್ ಮಾಡಿ" ಎಂದು ಒಬ್ಬರು ಅವಲತ್ತುಕೊಂಡರು. ಸಮ್ಮೇಳನದ ಆಯೋಜಕರು ಎಲ್ಲರಿಗೂ ಊಟದ ವ್ಯವಸ್ಥೆ ಮಾಡುವುದರಲ್ಲಿ "ಬಿಸಿ"ಯಾಗಿದ್ದರು. ಮಂತ್ರಿಗಳು ಆರು ಗಂಟೆ ತಡವಾಗಿ ಬಂದು ಕಾರ್ಯಕ್ರಮಗಲೆಲ್ಲಾ ಆಕ್ರಮಗಳಾಗಿಹೋಗಿದ್ದವು. ಮಂತ್ರಿಗಳ ಭಾಷಣದ ನಡುವೆ ಒಂದು ಗುಂಪು ಘೋಷಣೆ ಕೂಗಿದ್ದು ಆಭಾಸಕ್ಕೆ ಎಡೆಮಾಡಿಕೊಟ್ಟಿತ್ತು. ಮೊದಲೇ ಮಂತ್ರಿಗಳು ತಮ್ಮ ಹೆಸರು ಆರನೇ ಸಾಲಿನಲ್ಲಿ ಬಂದಿದೆ ಅಂತ "ಗರಂ" ಆಗಿದ್ದರು. ಅವರಿಗಾಗಿ ಆಮಂತ್ರಣ ಪತ್ರಿಕೆ, ಬ್ಯಾನರ್ ಎಲ್ಲವನ್ನೂ ಮರುಮುದ್ರಣ ಮಾಡಿ ಬಜೆಟ್ ಗೋತಾ ಹೊಡೆದಿತ್ತು. ಇಷ್ಟೆಲ್ಲಾ ಗೊಂದಲದ ನಡುವೆ ಸುಸ್ತಾದರೂ  ಮರುದಿನ ಪತ್ರಿಕೆಗಳಿಗಾಗಿ ಊಟದ ವ್ಯವಸ್ಥೆಗಳ ಫೋಟೋ ತೆಗೆಸುತ್ತಿದ್ದರು. ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರಿನ ವ್ಯವಸ್ಥೆ ಇದ್ದುದನ್ನು ನೋಡಿ ಜನ ಮೆಚ್ಚುಗೆಯಿಂದ ತಲೆದೂಗುತ್ತಿದ್ದರು. "ಸರ್ ದಯವಿಟ್ಟು ಅನೌನ್ಸ್ ಮಾಡಿ!" ಎಂದು ಬಂದವರು ಮತ್ತೊಮ್ಮೆ ಕೈಮುಗಿದು ಕೇಳಿಕೊಂಡರು. ಆಯೋಜಕರು ಸಿಡಿಮಿಡಿಗೊಂಡರು. ಆದರೂ ಪತ್ರಕರ್ತರು ಅಲ್ಲೇ ಓಡಾಡುತ್ತಾ ಇದ್ದುದರಿಂದ ಸಂಭಾಳಿಸಿಕೊಂಡು "ಆಗಲಿ, ಅನೌನ್ಸ್ ಮಾಡೋಣ. ಏನು ಕಳೆದುಹೋದವರ ಹೆಸರು?" ಎಂದರು. "ಕಳೆದುಹೋದವರು ಅಲ್ಲ, ಕಳೆದುಹೋದದ್ದು." "ಅಯ್ಯೋ ಕಳೆದುಹೋದದ್ದು ...

ಕರ್ನಾಟಕ ನಾಡಗೀತೆ - ಒಂದು ಸರಳ ಅರ್ಥವಿವರಣೆ

ಇಮೇಜ್
ಸಿ. ಪಿ. ರವಿಕುಮಾರ್  ಕರ್ನಾಟಕ ನಾಡಗೀತೆಯನ್ನು ಹಾಡುವವರಿಗೆ/ಕೇಳುವವರಿಗೆ  ಅದರ ಅರ್ಥ ತಿಳಿಯದೇ ಇದ್ದರೆ ಈ ಬ್ಲಾಗ್ ಬರಹವನ್ನು ಅವರು ಓದಬಹುದು. ಆದಷ್ಟೂ ಸರಳವಾಗಿ ಕವಿತೆಯ ಸಾರವನ್ನು ಹಿಡಿದಿಡಲು ಪ್ರಯತ್ನಿಸಿದ್ದೇನೆ.   ಈ ವಿಶಿಷ್ಟ ಕವಿತೆಯಲ್ಲಿ  ಕುವೆಂಪು ಭಾರತವನ್ನು ತಾಯಿಯಂತೆ ಮತ್ತು ಕರ್ನಾಟಕವನ್ನು ಮಗಳಂತೆ ಕಲ್ಪಿಸಿಕೊಂಡಿದ್ದಾರೆ.  ಇದನ್ನು ಅವರು ರಚಿಸಿದ್ದು ತಮ್ಮ ಹದಿಹರೆಯದಲ್ಲಿ. ಭಾರತಮಾತೆಯ ಮಗಳಾದ ಕರ್ನಾಟಕಮಾತೆಗೆ ಜಯವಾಗಲಿ ಎಂದು ನಾಡಗೀತೆ ಪ್ರಾರಂಭವಾಗುತ್ತದೆ. ಇಡೀ ಗೀತೆಯ ಉದ್ದಕ್ಕೂ ಅತ್ತ ಭಾರತಮಾತೆಯ ಹಿರಿಮೆ, ಇತ್ತ ಕರ್ನಾಟಕಮಾತೆಯ ಹಿರಿಮೆ ಇವುಗಳನ್ನು ಒಟ್ಟಿಗೆ ಕೊಂಡಾಡುವ ವಿಶಿಷ್ಟ ಪ್ರಯೋಗವನ್ನು ಕುವೆಂಪು ಮಾಡಿದ್ದಾರೆ. ರಾಷ್ಟ್ರವನ್ನೂ ಮತ್ತು ರಾಜ್ಯವನ್ನೂ ಏಕಕಾಲದಲ್ಲಿ ಸ್ತುತಿಸುವ ನಾಡಗೀತೆಯನ್ನು ಮತ್ತೊಮ್ಮೆ ಕೇಳಿ. ಜೈ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ! ಇಲ್ಲಿ ಕುವೆಂಪು ಭಾರತವನ್ನು ತಾಯಿಯಂತೆ ಮತ್ತು ಕರ್ನಾಟಕವನ್ನು ಮಗಳಂತೆ ಕಲ್ಪಿಸಿಕೊಂಡಿದ್ದಾರೆ. ಭಾರತಮಾತೆಯ ಮಗಳಾದ ಕರ್ನಾಟಕಮಾತೆಗೆ ಜಯವಾಗಲಿ ಎಂದು ನಾಡಗೀತೆ ಪ್ರಾರಂಭವಾಗುತ್ತದೆ. ಇಡೀ ಗೀತೆಯ ಉದ್ದಕ್ಕೂ ಅತ್ತ ಭಾರತಮಾತೆಯ ಹಿರಿಮೆ, ಇತ್ತ ಕರ್ನಾಟಕಮಾತೆಯ ಹಿರಿಮೆ ಇವುಗಳನ್ನು ಒಟ್ಟಿಗೆ ಕೊಂಡಾಡುವ ವಿಶಿಷ್ಟ ಪ್ರಯೋಗವನ್ನು ಕುವೆಂಪು ಮಾಡಿದ್ದಾರೆ. ರಾಷ್ಟ್ರವನ್ನೂ ಮತ್ತು ರಾಜ್ಯವನ್ನೂ ಏಕಕಾಲದಲ್ಲ...

ಗ್ರಂಥಾಲಯದಲ್ಲಿ ಕವನವಾಚನ

ಇಮೇಜ್
ಸಿ. ಪಿ. ರವಿಕುಮಾರ್ (17 ನವೆಂಬರ್, 2016) ಗ್ರಂಥಾಲಯ ಸಪ್ತಾಹ ಆಚರಣೆಯ ಪರವಾಗಿ ಒಂದು ಕಾವ್ಯವಚನ ಕಾರ್ಯಕ್ರಮಕ್ಕೆ ಬನ್ನಿ ಎಂದು ಗೆಳೆಯ ಅಭಿನವ ರವಿಕುಮಾರ್ ಕರೆ ಮಾಡಿದರು. ಸಾಲದೆಂಬಂತೆ "ತೊಗೊಳ್ಳಿ, ಶ್ರೀನಿವಾಸ್ ಅವರೂ ನಿಮ್ಮ ಜೊತೆ ಮಾತಾಡುತ್ತಾರೆ," ಎಂದು ಫೋನ್ ವರ್ಗಾಯಿಸಿದರು. "ರವಿಕುಮಾರ್, ನೀವು ಖಂಡಿತ ಬರಬೇಕಪ್ಪ." ಎಂದು ಆತ್ಮೀಯವಾಗಿ ಕರೆದವರು "ಶೂದ್ರ" ಶ್ರೀನಿವಾಸ್.  ಅವರು ನನ್ನ ಹಿತೈಷಿಗಳು.   ನ್ಯಾಷನಲ್ ಕಾಲೇಜಿನಲ್ಲಿ ನನಗೆ ಕನ್ನಡ ಪಾಠ ಹೇಳಿದ  ಕೆ.ಎನ್.ಎನ್. ಮತ್ತು ಎಚ್.ಎಸ್.ಎಂ.ಆರ್. ಇವರಿಬ್ಬರೂ ನನ್ನನ್ನು ಕುರಿತು ಆಡಿರಬಹುದಾದ ಒಳ್ಳೆಯ ಮಾತುಗಳು ನನಗೆ ಎಷ್ಟೋ ಜನ ಹಿತೈಷಿಗಳನ್ನು ಸಂಪಾದಿಸಿಕೊಟ್ಟಿದೆ! ಕಾವ್ಯವಾಚನದಲ್ಲಿ ಮುಖ್ಯ ಅತಿಥಿಯಾಗಿ ಬಂದವರು ಪ್ರಸ್ತುತ ಕನ್ನಡ ಕಾವ್ಯ ಸಂದರ್ಭದಲ್ಲಿ ಅತ್ಯಂತ ಮುಖ್ಯ ಕವಿಯೆಂದು ಗುರುತಿಸಲ್ಪಡುವ ಎಚ್.ಎಸ್. ವೆಂಕಟೇಶಮೂರ್ತಿ.  ಎಚ್ಚೆಸ್ವಿ ಅವರ ಕಾವ್ಯದ ಹರಹು ಬಹಳ ದೊಡ್ಡದು. ಮಕ್ಕಳ ಕವಿತೆಯಿಂದ ಹಿಡಿದು ಮಹಾಕಾವ್ಯದವರೆಗೆ. ಅವರನ್ನು ಮತ್ತೊಮ್ಮೆ ನೋಡುವ ಮತ್ತು ಅವರ ಮಾತು ಕೇಳುವ ಅವಕಾಶ ನನಗೆ ಸಿಕ್ಕಿತು. ಜಯನಗರದ ನಗರ ಕೇಂದ್ರ ಗ್ರಂಥಾಲಯದೊಂದಿಗೆ ತಮಗಿರುವ ಸಂಬಂಧವನ್ನು ಎಚ್.ಎಸ್.ವಿ. ನೆನೆಸಿಕೊಂಡರು. "ನಾನು ಬೆಂಗಳೂರಿಗೆ ಬಂದಾಗ ಮೊದಲು ನೆಲೆಸಿದ್ದು ಜಯನಗರದಲ್ಲಿ. ಪಾಠ ಹೇಳಿ ಮನೆಗೆ ಬಂದ ಮೇಲೆ ಸಂಜೆ ವಾಕಿಂಗ್ ಹೊರಟು ಇಲ...