ಪೋಸ್ಟ್‌ಗಳು

Kuvempu ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕವಿಶೈಲದಲ್ಲೊಂದು ಸಂಜೆ

ಇಮೇಜ್
ಕೂಗಲು ಮೇಲೊಂದು ಒಂಟಿ ಬೆಳ್ಳಕ್ಕಿ ಮುಗಿಲಲ್ಲಿ ರಾಗವದಾವುದೋ ಕೇಳುವುದು ಕವಿಮನಕ್ಕೆ!     ಮಾಗಿಯ ಚಳಿಯಲ್ಲಿ ಕಾವ್ಯಸೃಷ್ಟಿಯ ಕಠಿಣ ತ್ಯಾಗಗಳ ತಪದಲ್ಲಿ ತೊಡಗಿದ್ದ  ರಸಋಷಿಗೆ! ರಾಗಿ-ಬತ್ತದ ಪೈರಿನ ಹಸಿರು ಪತ್ತಲವನ್ನುಟ್ಟು ಮೇಘಗಳ ಕರಿನೇರಳೆ ಬಣ್ಣದ ರವಿಕೆಯಂ ತೊಟ್ಟು ಹೂಗಳ ಚೆಲುವಿನಿಂ  ಕಂಗೊಳಿಸುವ  ಮಲೆನಾಡಿತಿ    ಜಾಗ ನೀಡಿದ್ದಾಳೆ ತನ್ನ ಮಡಿಲಲ್ಲಿ, ಕವಿಶೈಲದಲ್ಲಿ! ಈಗ ಕೇಳುವುದು ಕ್ರೌಂಚಪಕ್ಷಿಗಳ ಹರ್ಷಕಲರವ ಈಗ ಕೇಳುವುದು ನಿಷಾದನ ಬಾಣಕ್ಕೆ ಅಸು- ನೀಗಿದ ಜೊತೆಗಾತಿಗೆ ಮರುಗುವ ಒಂಟಿ ಆರ್ತನಾದ! ರಾಘವನ ಅಂತರಂಗದ ವ್ಯಥೆಯು ಕೇಳುವುದು .. ಓಗೊಡುವುದು ಎಲ್ಲಿಂದಲೋ ಸೀತೆಯ ದುಃಖವೃಷ್ಟಿ ಸಾಗುವುದು ದುಃಖದ ದೋಣಿಯಲ್ಲಿ ಕಾವ್ಯಸೃಷ್ಟಿ   - ಸಿ. ಪಿ. ರವಿಕುಮಾರ್  (c) ೨೦೧೭ 

ಕುವೆಂಪು ಅವರ ವೀಣಾವಂದನೆ

ಇಮೇಜ್
ಸಿ ಪಿ ರವಿಕುಮಾರ್  ಕುವೆಂಪು ಅವರ ಶ್ರೀರಾಮಾಯಣದರ್ಶನಂ ಪ್ರಾರಂಭದಲ್ಲಿ ಬರುವ ಸರಸ್ವತೀ ವಂದನೆಯನ್ನು ಕೆಳಗೆ ಕೊಟ್ಟಿದ್ದೇನೆ, ಓದಿ. ಮಹಾಕಾವ್ಯದ ರಚನೆಗೆ ಮುಂಚೆ ಕವಿಗಳು ಸರಸ್ವತಿಯನ್ನು, ಗಣೇಶನನ್ನು ಪ್ರಾರ್ಥಿಸುವುದು ಒಂದು ಸಂಪ್ರದಾಯ. ಮಹಾಕಾವ್ಯ ರಚಿಸಲು ಅನೇಕ ವರ್ಷಗಳೇ ಬೇಕಾಗಬಹುದು. ಈ ಅವಧಿಯಲ್ಲಿ ಕಾವ್ಯಸ್ಫೂರ್ತಿ ನಿರಂತರವಾಗಿ ಹರಿಯಬೇಕು. ಬೇರೆ ಯಾವ ಕಾರಣಕ್ಕಾಗಿಯೂ ಕಾವ್ಯರಚನೆಯಲ್ಲಿ ಬಾಧೆಯಾಗಬಾರದು. ಏಳು, ವೀಣೆಯೆ; ಏಳು, ವಾಕ್ಸುಂದರಿಯ ಕಯ್ಯ ತ್ರೈಭುವನ ಸಮ್ಮೋಹಿನಿಯೆ, ಕವನ ಕಮನೀಯೆ! ಮಂತ್ರದಕ್ಷಿಗಳಿಂದೆ ನೋಳ್ಪ ನೀಂ ಸರ್ವಕ್ಕೆ ಸಾಕ್ಷಿ. ಕಂಡುದನೆಮಗೆ ಗಾನಗೆಯ್ ಶ್ರೀಕಂಠದಿಂ ಶತತಂತ್ರಿಯಾ. ಪ್ರತಿಭೆ ತಾಂ ಪ್ರಜ್ವಲಿಸುಗೆಮ್ಮೆರ್ದೆಗೆ ನಿನ್ನ ದರ್ಶನವೆಮ್ಮ ದರ್ಶನಂ ತಾನಪ್ಪವೋಲ್ ! ನಾರಣಪ್ಪಂಗಂತೆ ರನ್ನಂಗೆ ಮೇಣ್ ಪಂಪರಿಗೆ, ನಾಗವರ್ಮಗೆ ರಾಘವಾಂಕಗೆ ಲಕುಮಿಪತಿಗೆ, ವಾಲ್ಮೀಕಿ ವ್ಯಾಸರಿಗೆ ಹೋಮರಗೆ ಮಿಲ್ಟನಗೆ ದಾಂತೆ ಮೊದಲಹ ಮಹಾಕವಿಗಳಿಗೆ ನೀನೊಸೆದು                      ೧೦ ಕೃಪೆಗೈದ ವೈದ್ಯುತಪ್ರತಿಭೆಯಂ, ಹೇ ದೇವಿ, ಕಲ್ಪನಾಶಕ್ತಿಯಂ ವಾಙ್ಮಂತ್ರದುಕ್ತಿಯಂ ಆಯುರಾರೋಗ್ಯಮಂ ಶಾಂತಿ ಸೌಭಾಗ್ಯಮಂ ದಯಪಾಲಿಸೌ ನಿನ್ನ ಕನ್ನಡ ಕಂದನೀತಂಗೆ, ಸುರುಳಿಗುರುಳಂದಮೆಸೆವಾತ್ಮಸೌಂದರ್ಯಮಂ ಮುಡಿಪನರ್ಚಿಸಿ ಮಣಿಯುವೀ ಕವಿ ಕುವೆಂಪುವಿಗೆ ! ...

"ಬಾರಿಸು ಕನ್ನಡ ಡಿಂಡಿಮವ" - ಒಂದು ಮರು ಓದು

ಇಮೇಜ್
ಸಿ ಪಿ ರವಿಕುಮಾರ್  "ಬಾರಿಸು ಕನ್ನಡ ಡಿಂಡಿಮವ" ಎನ್ನುವುದು ಕನ್ನಡ ಪ್ರಚಾರಗೀತೆ ಎನ್ನುವಂತೆ ಮೇಲ್ನೋಟಕ್ಕೆ ತೋರುತ್ತದೆ. ಆದರೆ ಕವಿತೆಯನ್ನು ಪೂರ್ಣವಾಗಿ ಓದಿದರೆ ಅದು ಕುವೆಂಪು ಅವರು ಕನ್ನಡಿಗರ ಜಾಯಮಾನಕ್ಕೆ ನೊಂದು, ಬದಲಾವಣೆಗಾಗಿ ಪ್ರಾರ್ಥನಾರೂಪದಲ್ಲಿ  ಬರೆದ ಪದ್ಯ ಎಂಬ ತಿಳುವಳಿಕೆ ಮೂಡುತ್ತದೆ. ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ! ಕರ್ನಾಟಕದ ಹೃದಯ ಮಿಡಿಯಬೇಕಾದದ್ದು ಕನ್ನಡಕ್ಕೆ. ಆದರೆ ಅಲ್ಲಿ ಬೇರೆ ಭಾಷೆಗಳ ಮಿಡಿತವೇ ಹೆಚ್ಚು. ಕುವೆಂಪು ಅವರ ಕಾಲದಲ್ಲೂ ಇದು ಹಾಗೇ ಇತ್ತು, ಈಗಲೂ ಹಾಗೇ ಇದೆ!    ಹೇಗೆ ಶಿವ ತನಗೆ ಸಹಜವಾದ ಡಿಂಡಿಮ ಬಾರಿಸಬೇಕೋ ಹಾಗೇ ಕರ್ನಾಟಕದ ಹೃದಯ-ಶಿವ ಕನ್ನಡವೆಂಬ ಡಿಂಡಿಮ ಬಾರಿಸಬೇಕು ಎಂಬುದು ಕವಿಯ ನೊಂದ ಮನದ ಮೊರೆ. "ಬಾರಿಸು ಕನ್ನಡ ಡಿಂಡಿಮವ "ಎಂಬಲ್ಲಿ "ಕನ್ನಡ" ಶಬ್ದಕ್ಕೆ ಒತ್ತು.  ಸತ್ತಂತಿಹರನು ಬಡಿದೆಚ್ಚರಿಸು! ಕಚ್ಚಾಡುವರನು ಕೂಡಿಸಿ ಒಲಿಸು! ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು! ಒಟ್ಟಿಗೆ ಬಾಳುವ ತೆರದಲಿ ಹರಸು! ಕನ್ನಡ ಜನರಲ್ಲಿ ಒಗ್ಗಟ್ಟಿಲ್ಲ ಎನ್ನುವುದನ್ನು  ಕುವೆಂಪು ಮನಗಂಡಿದ್ದರು. ಏಕೀಕರಣದ ಸಮಯದಲ್ಲಿ ಕೂಡಾ ಒಡಕು ಧ್ವನಿಗಳಿದ್ದವು.  "ಅಖಂಡ ಕರ್ನಾಟಕ" ಪದ್ಯದಲ್ಲಿ ಇಂಥ ಒಡಕು ಧ್ವನಿಗಳನ್ನು ಎತ್ತುವ ಜನನಾಯಕರ ಬಗ್ಗೆ ಕುವೆಂಪು "ಮುಚ್ಚು ಬಾಯಿ" ಎಂಬ ರೀತಿಯಲ್ಲಿ ಗುಡುಗಿದ್ದಾರೆ. ಆದರೆ ...