ಪೋಸ್ಟ್‌ಗಳು

New Life ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಮರಗಳು

ಇಮೇಜ್
ಮರಗಳು ಮೂಲ: ಫಿಲಿಪ್ ಲಾರ್ಕಿನ್ ಕನ್ನಡಕ್ಕೆ: ಸಿ ಪಿ ರವಿಕುಮಾರ್ ಮರಗಳಲ್ಲಿ ಮತ್ತೆ ಒಡೆಯುತ್ತಿವೆ ಎಲೆ ಏನೋ ಹೇಳಲು ಬಾಯ್ತೆರೆದಂತೆ ತರು. ಕಣ್ತೆರೆದು ಅರಳುತ್ತವೆ ಹೊಸಚಿಗುರು ಅವುಗಳ ಹಸಿರಿನಲ್ಲಿದೆ ನೋವಿನ ಸೆಲೆ  ಮರುವುಟ್ಟು ಪಡೆದು ಅಮರವಾಗುವವೇ ವೃಕ್ಷ? ಜರೆ ಮತ್ತು ಸಾವು ನಮಗೆ ಮಾತ್ರವೇ? ಇಲ್ಲ, ಅವೂ ಸಾಯುತ್ತವೆ! ಬೇಕೇ ಪುರಾವೆ? ಮರದ ಉಂಗುರಗಳಲ್ಲಿದೆ ಅದರ ಆಯುಷ್ಯ ರಹಸ್ಯ. ಇಷ್ಟಾದರೂ ವೈಶಾಖ ಕಾಲಿಟ್ಟಾಗ ಮೈತುಂಬಾ ಹಸಿರು ಹೊದ್ದು ಸಂಭ್ರಮಿಸುವಳು ವೃಕ್ಷಸ್ತ್ರೀ ಪ್ರತಿವರ್ಷ "ಸತ್ತುಹೋಯಿತು ಹಳೆಯ ಸಂವತ್ಸರ!" ಅವಳ ಸಂದೇಶ, "ಮತ್ತೊಮ್ಮೆ ಎಲ್ಲವನ್ನೂ ಹೊಸದಾಗಿ ಮಾಡಿ ಶುರು!" (ಫಿಲಿಪ್ ಲಾರ್ಕಿನ್ ಒಬ್ಬ ಇಂಗ್ಲಿಷ್ ಕವಿ (೧೯೨೨-೨೦೦೧). ಇವನ ಕವಿತೆಗೂ ಬೇಂದ್ರೆ ಅವರ ಯುಗಾದಿ ಕವಿತೆಗೂ ಇರುವ ಸಾಮ್ಯ ಗಮನಿಸಿ. ಹೊಂಗೆ ಹೂವಿನ ಟೊಂಗೆಯಲ್ಲಿ ಪ್ರತಿವರ್ಷವೂ ವಸಂತದಲ್ಲಿ ಕೇಳಿ ಬರುವ ಸಂಗೀತವನ್ನು ಕೇಳಿದಾಗ, ಬೇವಿನ ಮರದಲ್ಲೂ ಹೂಗಳು ಚಿಗುರಿದಾಗ ಕವಿಯ ಮನಸ್ಸು ಯುಗಾದಿಯ ಚಮತ್ಕಾರದ ಕಡೆಗೆ ಹೊರಳುತ್ತದೆ. ಮರಗಳು ಹೀಗೆ ಮರುವುಟ್ಟು  ಪಡೆದುಕೊಳ್ಳುವುದು ಕವಿಗೆ ಆಶ್ಚರ್ಯ ಎನ್ನಿಸುತ್ತದೆ.  ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾಲಕೆ! ಒಂದೆ ಒಂದು ಜನ್ಮದಲಿ ಒಂದೆ ಬಾಲ್ಯ ಒಂದೆ ಹರಯ ನಮಗದಷ್ಟೆ ಏತಕೆ? ಎಂಬ ಬೇಂದ್ರೆ ಅವರ ಪ್ರಶ್ನೆ ಮತ್ತು ಫಿಲಿಪ್ ಲಾರ್ಕಿನ್ ಅವರ "ಮರಗಳು ಹೀಗೆ ಪ್ರತಿವರ್...

ಪ್ಲವ

ಪ್ಲವವು ತರಲಿ ನವಪಲ್ಲವ ನಮ್ಮೆಲ್ಲರ ಬಾಳಲಿ ಕವಲು ಒಡೆದ ದಾರಿ ಮತ್ತೆ ಒಂದಾಗಿ ಸೇರಲಿ ತವಕ, ಕ್ಷೋಭೆ, ಅನಿಶ್ಚಿತತೆ, ಭೀತಿ ಹಿಂದೆ ಸರಿಯಲಿ ಕವಿತೆಯಲ್ಲಿ ಮತ್ತೆ ಮಾವು ಮಲ್ಲಿಗೆಗಳು ಬಿರಿಯಲಿ. ಕೆಟ್ಟ ಕನಸಿನಿರುಳಿನಂತೆ ಕಳೆದು ಹೋದ ಶಾರ್ವರೀ ಬಿತ್ತಿಹೋದ ಭೀತಿಭಾವ ಕತ್ತಲಂತೆ ಕರಗಲಿ ದಟ್ಟಗಪ್ಪು ಮೋಡದಂಚಿನಲ್ಲಿ ಬೆಳ್ಳಿ ಮಿಂಚಲಿ ಮತ್ತೆ ಸ್ಥೈರ್ಯ ಹುಟ್ಟಿ ಪ್ಲವದ ಕಣ್ಣಿನಲ್ಲಿ ಹೊಳೆಯಲಿ ಒಡೆದ ವಿಶ್ವದಲ್ಲಿ ಮತ್ತೆ ಒಂದೇ ಬಿಂಬ ಮೂಡಲಿ ಒಡಕಲು ಸ್ವರ ಒಂದಾಗಿ ಒಂದೆ ರಾಗ ಹಾಡಲಿ ಕಡೆದ ಕಡಲಿನಲ್ಲಿ ಸುಧೆಯ ಹೊತ್ತು ತರಲಿ ಪ್ಲವ ತಡೆದು ಗಂಟಲಲ್ಲಿ ನಂಜು ಕಾಯುತಿಹನು ಶಿವ! (c) ಸಿ. ಪಿ. ರವಿಕುಮಾರ್, ಏಪ್ರಿಲ್ ೧೩, ೨೦೨೧