ಪೋಸ್ಟ್‌ಗಳು

Urdu ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹತ್ತು ಶೇರ್ ಗಳು

ಇಮೇಜ್
ಅನುವಾದ - ಸಿ. ಪಿ. ರವಿಕುಮಾರ್  ಬಾಗಿ ನಮಿಸಲು ಬೇಕಾದಷ್ಟಿವೆ ನೆಲಗಟ್ಟು, ತಬ್ಬಿಕೊಳ್ಳುವ ಬಾಗಿಲುಗಳು ಎಲ್ಲೂ ಕಾಣವು ಸುತ್ತಲೂ ಕಾಣುತ್ತಾರೆ ಸಾವಿರಾರು ದೇವರು, ಮಾನವರು ಮಾತ್ರ ಕಾಣರಲ್ಲ ಎಲ್ಲೂ -- ಖಾಲಿದ್ ಹಸನ್ ಕಾದಿರಿ ಮನುಷ್ಯ ಮನುಷ್ಯನನ್ನು ಸಂಧಿಸುತ್ತಾನೆ ಹೃದಯಗಳು ಸಂಧಿಸುವುದು ಮಾತ್ರ ಕಡಿಮೆ -- ಜಿಗರ್ ಮುರಾದಾಬಾದಿ ಮನುಷ್ಯತ್ವವೆಂಬುದು ಬೇರೆ, ಕಲಿಕೆ ಎಂಬುದೇ ಬೇರೆ ಗಿಳಿಗೆ ಎಷ್ಟೇ ಪಾಠ ಹೇಳಿದರೂ ಒರಟು ಪ್ರಾಣಿಯಾಗಿಯೇ ಉಳಿಯಿತು -- ಶೇಖ್ ಇಬ್ರಾಹಿಮ್ ಜೌಕ್ ಯಾರಿಂದ ಮನುಷ್ಯನಿಗೆ ಆಗುವುದೋ ತೊಂದರೆಯೇ ಸದಾ ಅಂಥವರು ತಾವೇ ದೇವಮಾನವರೆಂದು ಮಾಡುತ್ತಿದ್ದಾರೆ ವಾದ -- ಅಬ್ದುಲ್ ಹಮೀದ್ ಅದಮ್ ಭೂಮಿ ಸುತ್ತಿಬಳಸಿ ಸ್ವಸ್ಥಾನಕ್ಕೆ ಬರುತ್ತದೆಯಾದರೂ ಬಾರವು ಏತಕ್ಕೆ ಕಳೆದ ಸಮಯಗಳು ಮರಳಿ ವಾಪಸ್ಸು? -- ಇಬರತ್ ಮಛಲಿಶಹರಿ ತಮ್ಮದೇ ಸಮಸ್ಯೆಗಳನ್ನು ಕುರಿತು ಏನೂ ಮಾಡಲಾಗದವರು ಮಾತಾಡುವರು ತಾವೇ ಎಂಬಂತೆ ದೇವರು -- ಇಫ್ತಿಕಾರ್ ಆರಿಫ್ ಕೆಲವರು ಹಿಂದೂ ಕೆಲವರು ಮುಸಲ್ಮಾನರು ಮತ್ತು ಕೆಲವರು ಕ್ರೈಸ್ತರು ಮನುಷ್ಯರಾಗುವುದಿಲ್ಲ ಎಂದು ಭಾಷೆ ತೊಟ್ಟಂತಿದೆ ಎಲ್ಲರೂ -- ನಿದಾ ಫಾಜಲಿ ಗುಂಪು ಎಂಬುದು ಒಂಟಿತನಗಳ ಸಮ್ಮಿಲನ ಪ್ರತ್ಯೇಕವಾಗಿದ್ದಾರೆ ಜನರಿಂದ ಜನ -- ಸಬಾ ಅಕ್ಬರಾಬಾದಿ ಅವನಿಗೆ ಶತ್ರುಗಳು ಬಹಳ, ಮನುಷ್ಯ ಒಳ್ಳೆಯವನೇ ಇರಬೇಕ...

ಕಠಿಣ ಪ್ರೇಮದ ನಿಯಮ

ಇಮೇಜ್
ಮೂಲ ಉರ್ದೂ : ನಕ್ಷ್ ಲಾಲ್ ಪುರಿ  ಕನ್ನಡಕ್ಕೆ: ಸಿ. ಪಿ. ರವಿಕುಮಾರ್  "ರಸ್ಮೆ ಉಲ್ಫತ್ ಕೋ ನಿಭಾಯೇo ತೋ ನಿಭಾಯೇo ಕೈಸೇ" ಎಂದು ಪ್ರಾರಂಭವಾಗುವ ಈ ಗೀತೆಯ ರಚನೆ ನಕ್ಷ್ ಲಾಲ್ ಪುರಿ ಅವರದ್ದು. ಇದನ್ನು "ದಿಲ್ ಕೀ ರಾಹೇಂ" ಚಿತ್ರದಲ್ಲಿ ಬಳಸಲಾಗಿದೆ. ಮದನ್ ಮೋಹನ್ ಅವರ ಸಂಗೀತ ನಿರ್ದೇಶನದಲ್ಲಿ ಲತಾ ಮಂಗೇಶ್ಕರ್ ಹಾಡಿದ್ದಾರೆ. ಕಠಿಣ ಪ್ರೇಮದ ನಿಯಮ ಪಾಲಿಸುವುದಾದರೂ ಹೇಗೆ ಪಾಲಿಸಲಿ  ಸುತ್ತಲೂ ಹರಡಿರುವಾಗ ಬೆಂಕಿ ಸೆರಗನ್ನು ಹೇಗೆ ಕಾಪಾಡಲಿ? ಎಬ್ಬಿಸುತ್ತಾರಲ್ಲ ಜನರು ಹೃದಯದ ಹಾದಿಯಲ್ಲಿ  ಗೋಡೆಗಳನ್ನು ಉರುಳಿಸುವುದು ಹೇಗೆಂದು ಯಾರಾದರೂ ಹೇಳುವಿರೇನು? ಹಾಡುಗಳು ಸಾವಿರಾರಿವೆ ದುಃಖದಲ್ಲಿ ಅದ್ದಿದ್ದು, ಆದರೂ  ಮುರಿದ ಹೃದಯದ ವೀಣೆಯಲ್ಲಿ ನುಡಿಸುವುದದೆಂತು? ಎತ್ತಿಕೊಳ್ಳಬಹುದಾಗಿತ್ತು ಹೇಗೋ ದುಃಖಗಳ ಹೊರೆಯನ್ನಾದರೂ  ಬದುಕೇ ಹೊರೆಯಾದಾಗ ಮೇಲೆತ್ತಿ ಹೇಗೆ ನಡೆಯುವುದು?

ಹತ್ತು ಉರ್ದು ಶೇರ್

ಇಮೇಜ್
೧  ಮುಳ್ಳಿಂದಲೇ ತೆಗೆದೆ ಕಾಲಿಗೆ ಚುಚ್ಚಿದ ಮುಳ್ಳು ಏಕೆಂದರೆ ನೋಡಿ ಹೂವಿಗೆ ಬರಗಾಲ ಎಲ್ಲೆಲ್ಲೂ (ಆಕೀಲ್ ಶಾದಾಬ್) ೨ ಹೇಗೆ ಬದುಕಿದ್ದೇನೆ ಭೂಮಿಯ ಮೇಲೆ ಗೊತ್ತೇ? ಶತ್ರುವಿನ ಮನೆಯಲ್ಲಿ ಅತಿಥಿ ರಾತ್ರಿ ಕಳೆದಂತೆ (ಭಗವಾನ್ ದಾಸ್ ಏಜಾಜ್) ೩ ಮನೆಯಲ್ಲೇ ಆಗುಬಹುದು ಭಗವಂತನ ದರ್ಶನ ಮಕ್ಕಳೊಂದಿಗೆ ಮಗುವಾಗಿ ಆಡಿದರೆ ಎರಡು ಕ್ಷಣ (ಬಿಸ್ಮಿಲ್ ನವಶ್ ಬಂದಿ ) ೪ ಎಲ್ಲರ ಮನೆಗೆ ಹೋಗಿ ಕೊಚ್ಚುತ್ತಾರಲ್ಲ ಅವರಿವರ ಬಗ್ಗೆ ಹರಟೆ ಗಮ್ಮತ್ತು ತಮ್ಮ ಮನೆಯಲ್ಲೇ ಅವರಿಗೆ ಸಿಕ್ಕುವುದಿಲ್ಲ ಸವಕಲು ಕಾಸಿನ ಕಿಮ್ಮತ್ತು (ಅಸಿಮ್ ಶಹನಾಜ್ ಶಿಬ್ಲಿ) ೫ ಪ್ರತಿಯೊಂದು ವಿಷಯಕ್ಕೂ ಹಿಂದೂ ಮುಸ್ಲಿಂ ಎನ್ನುವೆಯಲ್ಲ ಕರ್ಮ! ಗೊತ್ತಿಲ್ಲವೇ ನಿನಗೆ ಸುಂದರಿ, ಪ್ರೇಮವೆಂಬುದೇ ಬೇರೆ ಧರ್ಮ (ಜಮಾಲುದ್ದೀನ್ ಆಲಿ) ೬ ಹೇಗೆ ಕೂಡಿಬಂದೀತು ಮಾತು? ಪ್ರತಿಯೊಂದೂ ಇಜ್ಜೋಡು ಕಣ್ಣಿಗಿಂತಲೂ ದೊಡ್ಡದು ಕನಸು, ನಿದ್ದೆಗಿಂತ ರಾತ್ರಿಯೇ ದೊಡ್ಡದು (ಶಾಹಿದ್ ಮೀರ್) ೭ ತೆರಳುವ ಮುನ್ನ ಕಾಲ ಉಳಿಸುವುದು ನೆನಪು ಮಾತ್ರ ಹಲವಾರು ಹಾರಿಹೋದರೂ ಹಕ್ಕಿ ಉಳಿದಂತೆ ಪಂಜರದಲ್ಲದರ ನೆರಳು (ನರೇಶ್) ೮ ಕಿಸೆ ಖಾಲಿಯಾದಾಗ ಹೇಗೆ ತೆಪ್ಪಗಾಗುತ್ತಾನೆ ಮನುಷ್ಯ ನೀರಿಲ್ಲದೇ ಹೋದಾಗ ಹೇಗೆ ತೆಪ್ಪಗಾಗುತ್ತದೋ ಮತ್ಸ್ಯ (ಜಹೀರ್ ಆತಿಶ್) ೯ ಬದುಕಿನುದ್ದಕ್ಕೂ ದೊಡ್ಡ ಮರಗಳನ್ನೇ ಹುಡುಕುತ್ತ ಹಾರಾಡಿದ ಹಕ್ಕಿ ಯಾವುದೋ ಬಳ್ಳಿಯ ತೊಡರಿನಲ್ಲಿ ನೆನ್ನೆ ಅದರ ಮೃತದೇಹ ಸಿಕ್ಕಿ...